Site icon DEPARTMENT OF AGRICULTURAL EXTENSION, COLLEGE OF AGRICULTURE, GKVK, BENGALURU – 560065

ಚಿಕ್ಕೋನಹಳ್ಳಿ ಯಲ್ಲಿ ಉಚಿತ ಮಣ್ಣು ಪರೀಕ್ಷಾ ಶಿಬಿರ {press coverage by Deccan herald , praja Vani and others}

ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಅಂತಿಮ ವರ್ಷದ ಬಿಎಸ್ಸಿ ಕೃಷಿ ವಿದ್ಯಾರ್ಥಿ ಗಳ ವತಿಯಿಂದ ಕುಣಿಗಲ್ ತಾಲೂಕ್ ಹುಲಿಯೂರುದುರ್ಗ ಹೋಬಳಿ ಚೌಡನಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಚಿಕ್ಕೋನಹಳ್ಳಿ ಗ್ರಾಮದಲ್ಲಿ ಉಚಿತ ಮಣ್ಣು ಪರೀಕ್ಷಾ ಶಿಬಿರವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಚೌಡನಕುಪ್ಪೆ, ನೀಲಸಂದ್ರ ,ಹೇರೋಹಳ್ಳಿ ಗ್ರಾಮದ ರೈತರನ್ನು ಒಳಗೊಂಡಂತೆ ತಾಲೂಕಿನ ವಿವಿಧ ಗ್ರಾಮಗಳ ರೈತರಗಳು ಉಪಸ್ಥಿತರಿದ್ದರು. ಕೃಷಿ ವಿದ್ಯಾರ್ಥಿಗಳು ಖುದ್ದಾಗಿ ರೈತರ ಹೊಲಗಳಿಗೆ ಭೇಟಿ ನೀಡಿ ನೂರಕ್ಕೂ ಹೆಚ್ಚು ಮಣ್ಣಿನ ಮಾದರಿಗಳನ್ನು ಸಂಗ್ರಹ ಮಾಡಿದ್ದರು. ಕೃಷಿ ವಿಸ್ತರಣೆ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾಕ್ಟರ್ ಶಿವಲಿಂಗಯ್ಯನವರು ಮಾತನಾಡಿ ತೆಂಗಿನಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆ ಮಾಡುವುದು ಅತ್ಯಗತ್ಯ ಎಂದು ಹೇಳಿದರು. ಮಣ್ಣು ವಿಜ್ಞಾನಿಗಳಾದ ಡಾಕ್ಟರ್ ಸತೀಶ್ ಅವರು ಮಾತನಾಡಿ ರಾಸಾಯನಿಕ ಗೊಬ್ಬರಗಳ ಕಲಬೆರಿಕೆಗಳನ್ನು ಕಂಡುಹಿದಿಯುವ ಬಗ್ಗೆ ತಿಳಿಸಿದರು. ಕೃಷಿ ವಿದ್ಯಾರ್ಥಿ ತೇಜಸ್ ಹೆಚ್.ಎನ್ ಮಾತನಾಡಿ ಮುಂದಿನ ದಿನಗಳಲ್ಲಿ ರೈತರಿಗೆ ವಿಶ್ವವಿದ್ಯಾನಿಲಯದ ವತಿಯಿಂದ ಉಚಿತವಾಗಿ ಮಣ್ಣಿನ ಆರೋಗ್ಯ ಚೀಟಿಗಳನ್ನು ವಿತರಿಸುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ರೈತರು ಉಪಸ್ಥಿತರಿದ್ದರು ಮತ್ತು ಕಾರ್ಯಕ್ರಮದಲ್ಲಿ ಕೃಷಿಗೆ ಸಂಬಂಧಿಸಿದ ಮಳಿಗೆಗಳನ್ನು ಹಾಕಲಾಗಿತ್ತು. ವಿಜ್ಞಾನಿಗಳು ಮತ್ತು ರೈತರ ಮಧ್ಯೆ ವಿಚಾರ ವಿನಿಮಯ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು ಮತ್ತು ಈ ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರದ ಡಾ. ಮುತ್ತೆಪ್ಪ ಚಿಗಡೊಳ್ಳಿ, ಡಾಕ್ಟರ್ ಲಕ್ಷ್ಮಿಪತಿ, ಡಾ. ಸೈಯದ್ ರಿಜ್ವಾನ್ ಅಹ್ಮದ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೃಷ್ಣೆಗೌಡ ಗ್ರಾ.ಪಂ.ಸದಸ್ಯ ಚೆಲುವಯ್ಯ ಗ್ರಾಮಸ್ಥರಾದ ಸದಾಶಿವಯ್ಯ, ಮಹೇಶ್ ಸಿ, ಭದ್ರಯ್ಯ,ನಿತ್ಯಣ್ಣ,ಪ್ರಭುಶಂಕರ್,ಮಂಜಣ್ಣ,ರವಿಕುಮಾರ್, ಮುಂತಾದವರು ಉಪಸ್ಥಿತರಿದ್ದರು.

Exit mobile version